Actress Ragini started new movie “Sarkari nyaya Bele Angadi” ರಾಗಿಣಿಯ ಹೊಸ ಬಿಸಿನೆಸ್ ಶುರುವಾಗಿದೆ ಅದು ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ.

— Press Release —

‘ನಟಿ ರಾಗಿಣಿ ಹೊಸ ಕಥೆಯೊಂದಿಗೆ, ಹೊಸ ಗೆಟಪ್ಪಿನೊಂದಿಗೆ ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ದಿನಸಿ ವಿತರಿಸುವ ಕಾಯಕಕ್ಕೆ ಬಣ್ಣ ಹಚ್ಚಿದ್ದಾರೆ.

ಹಾಗೆಯೇ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಜನರಿಗೆ ರೇಷನ್ ಕೊಡಮಾಡಿದ್ದಾರೆ.

ಬೆಂಗಳೂರು: ಮೇ. 24, ಕನ್ನಡ ಚಿತ್ರರಂಗದ ‘ತುಪ್ಪದ ಬೆಡಗಿ’ ಖ್ಯಾತಿಯ ನಟಿ ರಾಗಿಣಿ ದ್ವಿವೇದಿ ಅವರ ಜನ್ಮದಿನದ ಸಂಭ್ರಮವನ್ನು ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ಪಡಿತರ ಚೀಟಿದಾರರಿಗೆ ದಿನಸಿ ವಿತರಿಸುವ ಮೂಲಕ ಆಚರಿಸಿ ಕೊಂಡಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಈಗಾಗಲೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಹಳ್ಳಿಯ ಹುಡುಗಿಯಾಗಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗಳಲ್ಲಿ ನಡೆಯುವ ಲೋಪ-ದೋಷಗಳನ್ನು ಎತ್ತಿ ಹಿಡಿಯುವ ಪಾತ್ರ ರಾಗಿಣಿ ಅಭಿನಯಿಸುತ್ತಿದ್ದಾರೆ.

ತಮ್ಮ ಜನ್ಮದಿನದ ಸಂದರ್ಭದಲ್ಲಿ ನಟಿ ರಾಗಿಣಿ ದ್ವಿವೇದಿ, ತಮ್ಮ ಮುಂಬರುವ ಸಿನಿಮಾ ಮತ್ತು ಪಾತ್ರಕ್ಕೆ ತಕ್ಕಂತೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಗೆ ಅಡಿಯಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಪ್ರದೇಶದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಯಲ್ಲಿ ತಾವೇ ಖುದ್ದಾಗಿ ನಿಂತುಕೊಂಡು ಪಡಿತರ ಚೀಟಿದಾರರಿಗೆ ದಿನಸಿ ಸಾಮಾನುಗಳನ್ನು ವಿತರಿಸುವ ಮೂಲಕ ಪಡಿತರ ವಿತರಣೆ ವ್ಯವಸ್ಥೆಯನ್ನು ತಿಳಿದುಕೊಂಡರು. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಯಲ್ಲಿ ಪಡಿತರ ಚೀಟಿದಾರರು ಮತ್ತು ವಿತರಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರತಂಡದ ಜೊತೆಗೆ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನಟಿ ರಾಗಿಣಿ ದ್ವಿವೇದಿ ಇಂಥದ್ದೊಂದು ವಿಭಿನ್ನ ರೀತಿಯ ಕಾರ್ಯಕ್ರಮ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor